ಪೊಲೀಸ್ ಪೇದೆಗೆ ಚೂರಿ ಇರಿತ
ಬೆಂಗಳೂರು, ನ.30: ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಪೇದೆಗೆ ಚಾಕು ಇರಿದು ಗಾಯಗೊಳಿಸಿರುವ ಘಟನೆ ಇಲ್ಲಿನ ಆರ್ಟಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಿರಿಯ ಪೊಲೀಸ್ ಪೇದೆ ನಾಗರಾಜ್ ಎಂಬುವರು ಗಾಯಗೊಂಡಿದ್ದು, ಇಲ್ಲಿನ ಎಂಎ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಶನಿವಾರ ಮಧ್ಯಾಹ್ನ ಸುಮಾರಿಗೆ ಇಲ್ಲಿನ ಚಾಮುಂಡಿನಗರದಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ. ಈ ವೇಳೆ, ಪೊಲೀಸ್ ಪೇದೆ ನಾಗರಾಜ್ ಮಧ್ಯ ಪ್ರವೇಶಿಸಿ ಬುದ್ಧಿವಾದ ಹೇಳುತ್ತಿದ್ದ ವೇಳೆ, ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎನ್ನಲಾಗಿದೆ.
ನಾಗರಾಜ್ ಪೊಲೀಸ್ ಸಮವಸ್ತ್ರ ಧರಿಸಿರಲಿಲ್ಲ ಎಂದು ತಿಳಿದುಬಂದಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಆರ್ಟಿನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story