ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರೌಡಿ ಶೀಟರ್ ಪ್ರಕಾಶ್ ಕೊಲೆ
ಬೆಂಗಳೂರು, ಎ.22: ಗಂಭೀರ ಅಪರಾಧ ಸಂಬಂಧ ರೌಡಿ ಪಟ್ಟಿಯಲ್ಲಿದ್ದ ಪ್ರಕಾಶ್ ಅನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಇಲ್ಲಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಾನುಕುಂಟೆ ಪೊಲೀಸ್ ಠಾಣೆಯ ರೌಡಿ ಶೀಟರ್ ಆಗಿದ್ದ ಪ್ರಕಾಶ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದು ಪರಾರಿಯಾಗಿದ್ದಾರೆ.
ಘಟನೆಗೆ ಹಳೇ ದ್ವೇಷವೇ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಈ ಸಂಬಂಧ ತನಿಖೆ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story