ಐಎಂಎ ಬಹುಕೋಟಿ ವಂಚನೆ ಪ್ರಕರಣ: ಮನ್ಸೂರ್ ಖಾನ್ ಷೇರು ಮುಟ್ಟುಗೋಲು ?
ಬೆಂಗಳೂರು, ಜೂ.23: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಮನ್ಸೂರ್ ಖಾನ್ ಇತರೆ ಕಂಪೆನಿಗಳಲ್ಲಿ ಹೂಡಿಕೆ ಮಾಡಿರುವ ಷೇರುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸರಕಾರ ಮುಂದಾಗಿದೆ ಎಂದು ವರದಿಯಾಗಿದೆ.
ಈಗಾಗಲೇ ಸಿಬಿಐ ತನಿಖೆಗೆ ಮುಂದಾಗಿರುವ ನಡುವೆಯೇ ವಂಚನೆ ಪ್ರಕರಣದ ರೂವಾರಿ ಮನ್ಸೂರ್ ಖಾನ್, ಹೊರ ರಾಜ್ಯಗಳಲ್ಲಿರುವ ವಿವಿಧ ಕಂಪೆನಿಗಳಲ್ಲಿ ಹೂಡಿಕೆ ಮಾಡಿರುವ ಷೇರುಗಳನ್ನು ಮತ್ತು ಇದರ ಮೌಲ್ಯದ ಕುರಿತು ರಾಜ್ಯ ಸರಕಾರ ಮಾಹಿತಿ ಸಂಗ್ರಹಿಸುತ್ತಿದೆ ಎನ್ನಲಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ಈತನ ಷೇರುಗಳ ಮೌಲ್ಯ ಇಳಿಕೆಯಾಗುತ್ತಿರುವ ಕಾರಣ ಮಾರಾಟ ಆಗುವ ಸಾಧ್ಯತೆ ಹೆಚ್ಚಿದ್ದು, ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಭೂ ಕಂದಾಯ ಕಾಯ್ದೆ ಅಡಿ ಪರಿಶೀಲನೆಗೊಳಪಡಿಸಲಾಗಿದೆ. ಈ ಕುರಿತು ಆರ್ಥಿಕ ಇಲಾಖೆಯ ಅಭಿಪ್ರಾಯವನ್ನು ಸಹ ಕೋರಲಾಗಿದೆ ಎಂದು ಮೂಲಗಳು ತಿಳಿಸಿವೆ.
Next Story