ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರನ್ನು ಭೇಟಿಯಾದ ಆಶಾ ಕಾರ್ಯಕರ್ತೆಯರು
ಬೆಂಗಳೂರು, ಜು.8: ತಮ್ಮ ಬೇಡಿಕೆಗಳನ್ನು ಈಡೇರಿಸದ ಸರಕಾರದ ವಿರುದ್ಧ ಹೋರಾಟದ ಹಾದಿ ತುಳಿದಿರುವ ಆಶಾ ಕಾರ್ಯಕರ್ತೆಯರು ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸದಾಶಿವ ನಗರ ನಿವಾಸಕ್ಕೆ ಭೇಟಿ ನೀಡಿ, ತಮ್ಮ ಸಂಕಷ್ಟ ನಿವೇದಿಸಿಕೊಂಡರು.
ಜತೆಗೆ ತಮ್ಮ ಹೋರಾಟಕ್ಕೆ ತಮ್ಮ ಸಹಕಾರ ನೀಡುವಂತೆ ಕೋರಿದರು. ಆಶಾ ಕಾರ್ಯಕರ್ತೆಯರ ಮನವಿಗೆ ಸ್ಪಂದಿಸಿದ ಡಿ.ಕೆ ಶಿವಕುಮಾರ್, ಎಲ್ಲ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.
Next Story