ವಾಜೀದ್, ಪ್ರಸನ್ನಕುಮಾರ್ ಜೊತೆ ಪಕ್ಷಕ್ಕೆ ಸಂಬಂಧವಿಲ್ಲ: ಜೆಡಿಎಸ್ ಸ್ಪಷ್ಟನೆ
ಕಾವಲ್ ಭೈರಸಂದ್ರ ಗಲಾಟೆ ಪ್ರಕರಣ
ಬೆಂಗಳೂರು, ಆ.20: ಕಾವಲ್ ಭೈರಸಂದ್ರ ಗಲಾಟೆ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಎಂ.ಅಬ್ದುಲ್ ವಾಜೀದ್ ಪಾಷಾ ಹಾಗೂ ಪುಲಕೇಶಿನಗರ ಕ್ಷೇತ್ರದ ಮಾಜಿ ಶಾಸಕ ಪ್ರಸನ್ನಕುಮಾರ್ ಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಜೆಡಿಎಸ್ ಸ್ಪಷ್ಟನೆ ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ಬೆಂಗಳೂರು ಅಧ್ಯಕ್ಷ ಆರ್.ಪ್ರಕಾಶ್, ವಾಜೀದ್ ಪುಲಿಕೇಶಿನಗರದ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಪ್ರಸನ್ನಕುಮಾರ್ ಅವರ ಬೆಂಬಲಿಗರಾಗಿದ್ದಾರೆ. ಇವರಿಬ್ಬರೂ ಕಾಂಗ್ರೆಸ್ನಿಂದ ಜೆಡಿಎಸ್ ಪಕ್ಷಕ್ಕೆ ಬಂದಿದ್ದು, ಮತ್ತೆ ಕಾಂಗ್ರೆಸ್ ಪಕ್ಷದ ಕಡೆಗೆ ಮುಖ ಮಾಡಿದ್ದಾರೆ. ಇಂಥವರ ಕೃತ್ಯಗಳಿಗೂ ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.
Next Story