ಎಐಸಿಸಿಗೆ ನೇಮಕ: ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡಗೆ ಸಿದ್ದರಾಮಯ್ಯ ಅಭಿನಂದನೆ
ಬೆಂಗಳೂರು, ಸೆ. 12: ತಮಿಳುನಾಡು, ಪುದುಚೇರಿ, ಗೋವಾ ರಾಜ್ಯಗಳ ಉಸ್ತುವಾರಿಯಾಗಿ ಎಐಸಿಸಿ ವತಿಯಿಂದ ನೇಮಕವಾಗಿರುವ ಕೆಪಿಸಿಸಿಯ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಎಐಸಿಸಿ ಚುನಾವಣಾ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಸಚಿವ ಕೃಷ್ಣಬೈರೇಗೌಡ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪುಷ್ಪಗುಚ್ಚ ನೀಡುವ ಮೂಲಕ ಅಭಿನಂದಿಸಿದರು.
ಶುಕ್ರವಾರ ಇಲ್ಲಿನ ಕುಮಾರಕೃಪಾದಲ್ಲಿರುವ ಸಿದ್ದರಾಮಯ್ಯ ನಿವಾಸದಲ್ಲಿ ದಿನೇಶ್ ಗುಂಡೂರಾವ್ ಹಾಗೂ ಕೃಷ್ಣಬೈರೇಗೌಡ ಸೇರಿ ಇಬ್ಬರು ನಾಯಕರನ್ನು ಅಭಿನಂದಿಸಿದ ಶುಭ ಹಾರೈಸಿದರು. ಅಲ್ಲದೆ, ತಮಗೆ ವಹಿಸಿರುವ ಹೊಣೆಯನ್ನು ಸಮರ್ಥವಾಗಿ ನಿಭಾಯಿಸುವಂತೆ ಸಲಹೆ ನೀಡಿದ ಸಿದ್ದರಾಮಯ್ಯ, ಇಬ್ಬರ ಜೊತೆಗೆ ಕೆಲಕಾಲ ಸಮಾಲೋಚನೆ ನಡೆಸಿದರು.
Next Story