ಮೂವರು ಗಾಂಜಾ ಮಾರಾಟ ಆರೋಪಿಗಳ ಬಂಧನ: 30.23 ಕೆಜಿ ಗಾಂಜಾ ಜಪ್ತಿ
ಬೆಂಗಳೂರು, ಸೆ.22: ಒಡಿಸ್ಸಾದಿಂದ ಗಾಂಜಾ ತಂದು ರಾಜ್ಯದಲ್ಲಿ ಮಾರಾಟ ಮಾಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಿ 30.23 ಕೆ.ಜಿ. ತೂಕದ ಗಾಂಜಾ ಜಪ್ತಿ ಮಾಡುವಲ್ಲಿ ಸಂಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಭೂಪಸಂದ್ರ ಹೊಸ ಬಡಾವಣೆಯ ಶಬ್ಬೀರ್ ಖಾನ್ನನ್ನು ಬಂಧಿಸಿ ಆತ ನೀಡಿದ ಮಾಹಿತಿ ಮೇರೆಗೆ ಆಂಧ್ರಪ್ರದೇಶ ವಿಶಾಖಪಟ್ಟಣ ದುಮ್ರಗಡ ಮಂಡಲ ಜನಕರವಲಸ ನಿವಾಸಿ ಭೀಮಣ್ಣ(28), ವಿಶಾಖಪಟ್ಟಣ, ದುಮ್ರಗುಡ ಮಂಡಲ ಪನ್ಸಪುಟ್ಟು ನಿವಾಸಿ ಎಸ್. ನನ್ನರಾವ್(24) ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ..
ಸೆ.21ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭೂಪಸಂದ್ರ 1ನೇ ಕ್ರಾಸ್ ಮೋಹನ್ ರಾಜ್ ಲೇಔಟ್ ಲಕ್ಷ್ಮೀವೆಂಕಟೇಶ್ವರ ದೇವಸ್ಥಾನ ಪಕ್ಕದ ರಸ್ತೆಯಲ್ಲಿ ವ್ಯಕ್ತಿಯೋರ್ವ ಮಾದಕ ವಸ್ತು ಗಾಂಜಾ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
Next Story