ಮನೆಗೆ ನುಗ್ಗಿ ಲಕ್ಷಾಂತರ ರೂ. ನಗದು, ಚಿನ್ನಾಭರಣ ಕಳವು
ಬೆಂಗಳೂರು, ಅ.12: ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಇಲ್ಲಿನ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಗರದ ಬಾಣಸವಾಡಿಯ ಅಮಿತ್ ಬಹೇಟಿ ಎಂಬುವವರ ಮನೆಯಲ್ಲಿ ಕಳ್ಳತನ ಆಗಿದ್ದು, ಅ.4 ರಂದು ಮನೆಗೆ ಬೀಗ ಹಾಕಿಕೊಂಡು ಮಡಿಕೇರಿಗೆ ಹೋಗಿದ್ದರು. ನಂತರ ಅ.10ರಂದು ಮನೆಗೆ ತೆರಳಿದಾಗ ಬೀಗ ಒಡೆದು ದುಷ್ಕರ್ಮಿಗಳು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
ಪರಿಶೀಲಿಸಿದಾಗ ಮನೆಯಲ್ಲಿದ್ದ ಸುಮಾರು 2 ಲಕ್ಷ ನಗದು ಹಾಗೂ 20 ಗ್ರಾಂ ಚಿನ್ನ ಮತ್ತು 50 ಗ್ರಾಂ ಬೆಳ್ಳಿ ಕಳ್ಳತನವಾಗಿರುವ ವಿಚಾರ ಬಯಲಾಗಿದೆ.
ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story