ಸಿದ್ದರಾಮಯ್ಯ ಕಾರು ಚಾಲಕ, ಕುಸುಮಾ ವಿರುದ್ಧ ಎಫ್ಐಆರ್
ಬೆಂಗಳೂರು, ಅ.14: ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರು ಚಾಲಕ ಹಾಗೂ ಅಭ್ಯರ್ಥಿ ಕುಸುಮಾ ವಿರುದ್ಧ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಬ್ಯಾರಿಕೇಡ್ಗಳನ್ನು ಸರಿಸಿ ವಾಹನಗಳನ್ನು ಬಿಬಿಎಂಪಿ ಕಚೇರಿಯ ಮುಂಭಾಗಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಇದರಿಂದ, ಕಾನೂನು ಉಲ್ಲಂಘನೆಯಾಗಿದೆ ಎಂದು ದೂರು ದಾಖಲಿಸಲಾಗಿದೆ. ಐಪಿಸಿ 353, 188ರಡಿ ದೂರು ದಾಖಲಾಗಿದೆ. 100 ಮೀಟರ್ ಒಳಗೆ ಸಿದ್ದರಾಮಯ್ಯ ಅವರ ವಾಹನ ಚಾಲಕ ವಾಹನ ತೆಗೆದುಕೊಂಡು ಹೋಗಿದ್ದರು. ಹೀಗಾಗಿ, ಎಫ್ಐಆರ್ ದಾಖಲಾಗಿದೆ.
Next Story