ಪರ್ತಕರ್ತ ಪವನ್ ಹೆತ್ತೂರು ನಿಧನ
ಬೆಂಗಳೂರು, ಅ.18: ಯುವ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಮೈಸೂರು ಪ್ರಜಾವಾಣಿ ಬ್ಯೂರೋ ದಲ್ಲಿ ಕೆಲಸ ಮಾಡುತ್ತಿದ್ದ ಪವನ್, ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ.
ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪವನ್ ಗೆ ಆರೋಗ್ಯ ಗಂಭೀರವಾಗಿ, ಚಿಕಿತ್ಸೆಗೆ ಸ್ಪಂಧಿಸಲಿಲ್ಲ. ರಾತ್ರಿ 1.30ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ: ಪತ್ರಕರ್ತ ಪವನ್ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.
Next Story