ಬೆಂಗಳೂರು: ಹೋಟೆಲ್ನಲ್ಲಿ ಆಕಸ್ಮಿಕ ಬೆಂಕಿ
ಬೆಂಗಳೂರು, ಅ.19: ರಾಜಧಾನಿ ಬೆಂಗಳೂರಿನ ಗಾಂಧಿ ಬಜಾರ್ ವ್ಯಾಪ್ತಿಯಲ್ಲಿನ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್ನಲ್ಲಿ ಇಂದು ಬೆಳಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಸೋಮವಾರ ಹೋಟೆಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಹೋಟೆಲ್ ನ ಹಲವು ಸಾಮಗ್ರಿಗಳು ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.
Next Story