ಬೆಂಗಳೂರು ಗಲಭೆ ಪ್ರಕರಣ: ದಾಳಿಗೆ ಮುನ್ನ ಆರೋಪಿಗಳ ಜೊತೆ ಸಂಪರ್ಕದಲ್ಲಿದ್ದ ಸಂಪತ್ ರಾಜ್ ?
ಬೆಂಗಳೂರು, ಅ.20: ಡಿಜೆ-ಕೆಜಿಹಳ್ಳಿ ಗಲಭೆ ಪ್ರಕರಣ ಸಂಬಂಧ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರ ಮೊಬೈಲ್ ಕರೆಗಳ ಮಾಹಿತಿ ಬಹಿರಂಗಗೊಂಡಿದೆ ಎಂದು ವರದಿಯಾಗಿದೆ.
ದುಷ್ಕರ್ಮಿಗಳು, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ ನಡೆಸುವ ಮುನ್ನ ಸಂಪತ್ ರಾಜ್, ಆರೋಪಿಗಳ ಜತೆ ಸಂಪರ್ಕದಲ್ಲಿದ್ದ ಬಗ್ಗೆ ಸುಳಿವು ಸಿಕ್ಕಿದೆ ಎಂದು ಮೂಲಗಳು ತಿಳಿಸಿವೆ.
ಗಲಭೆ ನಡೆದ ದಿನದಂದು ಆರೋಪಿಗಳಾದ ಸಜ್ಜದ್ ಖಾನ್, ಮುಜಾಹಿದ್ ಪಾಷಾ, ಯಾಸೀನ್ ಝಾಕೀರ್ ಸೇರಿದಂತೆ ಹಲವರೊಂದಿಗೆ ಸಂಪತ್ರಾಜ್ ಮೊಬೈಲ್ ಸಂಪರ್ಕದಲ್ಲಿದ್ದರು. ಇದೇ ಆರೋಪಿಗಳು ಘಟನಾ ಸ್ಥಳದಲ್ಲಿದ್ದದ್ದು ಎಂದು ನೆಟ್ವರ್ಕ್ ಲೊಕೇಶನ್ ಮೂಲಕ ಸಾಬೀತಾಗಿದೆ ಎನ್ನಲಾಗಿದೆ.
Next Story