ಮುಖ್ಯಮಂತ್ರಿ ಸಹಿತ ಗಣ್ಯರಿಂದ ಮೀಲಾದುನ್ನಬಿ ಶುಭಾಶಯ
ಬೆಂಗಳೂರು, ಅ.30: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಮೀಲಾದುನ್ನಬಿ ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ‘‘ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ಮೀಲಾದುನ್ನಬಿ ಶುಭಾಶಯಗಳು. ಪ್ರವಾದಿ ಮುಹಮ್ಮದ್(ಸ.) ಅವರ ಸಂದೇಶಗಳು ಸಮಾಜದಲ್ಲಿ ಸೋದರತ್ವ, ಸೌಹಾರ್ದವನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸುತ್ತೇನೆ’’ ಎಂದು ಹಾರೈಸಿದ್ದಾರೆ.
‘‘ಪ್ರವಾದಿ ಮುಹಮ್ಮದ್(ಸ.) ಪೈಗಂಬರರ ಬೋಧನೆ ಮತ್ತು ಸಾಧನೆ ಸಮಾನತೆ-ಸೌಹಾರ್ದದ ಸಮಾಜವನ್ನು ಕಟ್ಟುವ ನಮ್ಮ ಕೈಗಳಿಗೆ ಇನ್ನಷ್ಟು ಬಲ ತಂದು ಕೊಡಲಿ. ನಾಡಿನ ನನ್ನೆಲ್ಲ ಮುಸ್ಲಿಮ್ ಬಂಧುಗಳಿಗೆ ಮೀಲಾದುನ್ನಬಿ ಶುಭಾಶಯಗಳು’’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಶುಭ ಕೋರಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ‘‘ನಾಡಿನ ಎಲ್ಲ ಮುಸ್ಲಿಂ ಬಾಂಧವರಿಗೆ ಮೀಲಾದುನ್ನಬಿ ಶುಭಾಶಯಗಳು. ಮಾನವಕುಲಕ್ಕೆ ಶಾಂತಿ ಹಾಗೂ ಸಮಾನತೆಯ ಸಂದೇಶ ಸಾರಿದ ಪ್ರವಾದಿ ಮುಹಮ್ಮದ್(ಸ.) ಪೈಗಂಬರರಿಗೆ ನಮನಗಳನ್ನು ಸಲ್ಲಿಸುತ್ತಾ ಸಹೋದರತ್ವ ಹಾಗೂ ಸೌಹಾರ್ದತೆ ನಾಡಿನಲ್ಲಿ ಶಾಶ್ವತವಾಗಿ ನೆಲೆಸಲಿ ಎಂದು ಶುಭ ಹಾರೈಸುತ್ತೇನೆ’’ ಎಂದು ಟ್ವೀಟಿಸಿದ್ದಾರೆ.
ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ಈದ್ ಮಿಲಾದ್ ಹಬ್ಬದ ಶುಭಾಶಯಗಳು. ಪ್ರವಾದಿ ಮೊಹಮ್ಮದ್ ಅವರ ಸಂದೇಶಗಳು ಸಮಾಜದಲ್ಲಿ ಸೋದರತ್ವ, ಸೌಹಾರ್ದತೆಗಳನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸುತ್ತೇನೆ: @BSYBJP#EidMiladUnNabi
— CM of Karnataka (@CMofKarnataka) October 30, 2020
ಪ್ರವಾದಿ ಮಹಮ್ಮದ್ ಪೈಗಂಬರರ
— Siddaramaiah (@siddaramaiah) October 30, 2020
ಬೋಧನೆ ಮತ್ತು ಸಾಧನೆ ಸಮಾನತೆ-ಸೌಹಾರ್ದತೆಯ ಸಮಾಜವನ್ನು ಕಟ್ಟುವ ನಮ್ಮ ಕೈಗಳಿಗೆ ಇನ್ನಷ್ಟು ಬಲ ತಂದು ಕೊಡಲಿ.
ನಾಡಿನ ನನ್ನೆಲ್ಲ
ಮುಸ್ಲಿಮ್ ಬಂಧುಗಳಿಗೆ ಈದ್-ಮಿಲಾದ್ ಶುಭಾಶಯಗಳು. pic.twitter.com/Tl2wB7ZjbN
ನಾಡಿನ ಎಲ್ಲ ಮುಸ್ಲಿಂ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಶುಭಾಶಯಗಳು. ಮಾನವಕುಲಕ್ಕೆ ಶಾಂತಿ ಹಾಗೂ ಸಮಾನತೆಯ ಸಂದೇಶ ಸಾರಿದ ಪ್ರವಾದಿ ಮಹಮ್ಮದ್ ಪೈಗಂಬರರಿಗೆ ನಮನಗಳನ್ನು ಸಲ್ಲಿಸುತ್ತಾ ಸಹೋದರತ್ವ ಹಾಗೂ ಸೌಹಾರ್ದತೆ ನಾಡಿನಲ್ಲಿ ಶಾಶ್ವತವಾಗಿ ನೆಲೆಸಲಿ ಎಂದು ಶುಭ ಹಾರೈಸುತ್ತೇನೆ.#EidMubarak #EidMiladUnNabi
— H D Kumaraswamy (@hd_kumaraswamy) October 30, 2020