ಸಮಾಜ ಸೇವೆ ಮುಂದುವರಿಸಿ ನೊಂದವರ ದನಿಯಾಗುತ್ತೇನೆ: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ
ಬೆಂಗಳೂರು, ನ.10: ಉಪಚುನಾವಣೆ ಫಲಿತಾಂಶದ ತೀರ್ಪು ಸ್ವೀಕರಿಸುತ್ತೇನೆ. ಜತೆಗೆ, ನನ್ನ ಸಮಾಜ ಸೇವಾ ಕಾರ್ಯಗಳನ್ನು ಮುಂದುವರಿಸುವ ಮೂಲಕ ನೊಂದವರ ದನಿಯಾಗುತ್ತೇನೆ ಎಂದು ಆರ್ಆರ್ ನಗರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಎಚ್.ಕುಸುಮಾ ಹೇಳಿದ್ದಾರೆ.
ಮಂಗಳವಾರ ಈ ಕುರಿತು ತಮ್ಮ ಫೇಸ್ಬುಕ್ ಪುಟದಲ್ಲಿ ಬರೆದಿರುವ ಅವರು, ಚುನಾವಣೆಯಲ್ಲಿ ನೀವು ಕೊಟ್ಟಿರುವ ಈ ತೀರ್ಪನ್ನು ತಲೆಬಾಗಿ ಸ್ವೀಕರಿಸುತ್ತೇನೆ. ಕಾಂಗ್ರೆಸ್ ಪಕ್ಷ ಸೇರಿದಂತೆ ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ.
ನಮ್ಮ ರಾಜಜರಾಜೇಶ್ವರಿ ನಗರ ಕ್ಷೇತ್ರ ಎಂದೆಂದಿಗೂ ನನ್ನ ಕರ್ಮಭೂಮಿ. ಎಂದಿನಂತೆ ನಿಮ್ಮೊಂದಿಗಿದ್ದು ನನ್ನ ಸಮಾಜ ಸೇವಾ ಕಾರ್ಯಗಳನ್ನು ಮುಂದುವರಿಸುವ ಮೂಲಕ ನೊಂದವರ ದನಿಯಾಗುತ್ತೇನೆ ಎಂದು ಅವರು ಹೇಳಿದ್ದಾರೆ.
Next Story