ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹಾದೇವ ಪ್ರಕಾಶ್ ರಾಜೀನಾಮೆ
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಮಾಧ್ಯಮ ಸಲಹೆಗಾರರಾಗಿರುವ ಮಹಾದೇವ ಪ್ರಕಾಶ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ತಮ್ಮ ಮಾಧ್ಯಮ ಸಲಹೆಗಾರರಾಗಿ ಕಳೆದ ಒಂದು ವರ್ಷದಿಂದ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಹೃದಯಪೂರ್ವಕ ಧನ್ಯವಾದಗಳು. ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಯಡಿಯೂರಪ್ಪನವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಮಹಾದೇವ ಪ್ರಕಾಶ್ ತಿಳಿಸಿದ್ದಾರೆ.
Next Story