ಮಾಜಿ ಮೇಯರ್ ಸಂಪತ್ರಾಜ್ ಆಸ್ಪತ್ರೆಗೆ ದಾಖಲು
ಬೆಂಗಳೂರು, ನ.22: ಡಿ.ಜೆ.ಹಳ್ಳಿ-ಕೆ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿ ಕಾರಾಗೃಹದಲ್ಲಿರುವ ಮಾಜಿ ಮೇಯರ್ ಸಂಪತ್ರಾಜ್ ಅವರಿಗೆ ಹೃದ್ರೋಗ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಪತ್ರಾಜ್ ಅವರ ಆರೋಗ್ಯ ತಪಾಸಣೆಯನ್ನು ವೈದ್ಯರು ನಡೆಸಿದ್ದು, ಗುಣಮುಖರಾದ ಬಳಿಕ ಅವರನ್ನು ಕಾರಾಗೃಹಕ್ಕೆ ರವಾನಿಸಲಾಗುತ್ತದೆ. ಗಲಭೆ ಸಂಬಂಧ ಸಂಪತ್ರಾಜ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಜೈಲಿಗೆ ಕಳುಹಿಸಲಾಗಿದೆ.
ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
Next Story