ತಾಂತ್ರಿಕ ದೋಷ: ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಕಾರು
ಬೆಂಗಳೂರು, ನ.26: ಹೆಬ್ಬಾಳದಿಂದ ನಗರದ ಕಡೆಗೆ ಚಲಿಸುತ್ತಿದ್ದ ಕಾರಿನಲ್ಲಿ ತಾಂತ್ರಿಕ ದೋಷ ಕಂಡು ಬಂದು ರಸ್ತೆ ಮಧ್ಯದಲ್ಲೇ ಹೊತ್ತಿ ಉರಿದಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಶ್ರೀಧರ್ ಕಾರಿನಿಂದ ಹೊರಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ಸಂಬಂಧ ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಬಗ್ಗೆ ಸದಾಶಿವನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story