ಕಾರು - ಲಾರಿ ಢಿಕ್ಕಿ : ನಾಲ್ವರಿಗೆ ಗಾಯ
ಬೆಂಗಳೂರು, ನ.29: ಅತಿ ವೇಗವಾಗಿ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನೆಲಮಂಗಲದ ಬಳಿಯಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡ ಕಾರಿನಲ್ಲಿದ್ದ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನೆಲಮಂಗಲದ ಬಳಿಯ ರಾಷ್ಟ್ರೀಯ ಹೆದ್ದಾರಿ ಕುಲುವನಹಳ್ಳಿ ಬಳಿ ವೇಗವಾಗಿ ಹೋಗುತ್ತಿದ್ದ ಕಾರು ರಸ್ತೆ ವಿಭಜಕ ದಾಟಿ ಕ್ಯಾಂಟರ್ ಲಾರಿಗೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಈ ಸಂಬಂಧ ನೆಲಮಂಗಲ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story