ಎರಡು-ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ: ಸಿಎಂ ಯಡಿಯೂರಪ್ಪ
ಬೆಂಗಳೂರು, ನ. 29: ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ.
ರವಿವಾರ ಚಿತ್ರದುರ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಸಂಬಂಧ ಯಾವುದೇ ಗೊಂದಲಗಳಿಲ್ಲ. ಈಗಾಗಲೇ ಎಲ್ಲವೂ ಸ್ಪಷ್ಟವಾಗಿದ್ದು, ಇನ್ನೂ ಎರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಇದೇ ವೇಳೆ ಪುನರುಚ್ಚರಿಸಿದರು.
ಸಂಪುಟಕ್ಕೆ ಯಾರೂ ಸೇರ್ಪಡೆ ಮತ್ತು ಎಷ್ಟು ಮಂದಿ ಸಚಿವರಾಗಬೇಕು ಎಂದು ದಿಲ್ಲಿಯ ವರಿಷ್ಠರು ತೀರ್ಮಾನ ಮಾಡಲಿದ್ದಾರೆ. ಸಂಪುಟ ವಿಸ್ತರಣೆ ವಿಳಂಬ ಮಾಡುವ ಪ್ರಶ್ನೆಯೆ ಇಲ್ಲ. ವರಿಷ್ಟರ ಒಪ್ಪಿಗೆ ನೀಡಿದ ಕೂಡಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು.
Next Story