ಮದ್ಯದಂಗಡಿ ಮಾಲಕನ ಮೇಲೆ ಹಲ್ಲೆ ಆರೋಪ: ದೂರು ದಾಖಲು
ಬೆಂಗಳೂರು, ಜ.2: ಇಬ್ಬರು ದುಷ್ಕರ್ಮಿಗಳು ಜೊತೆಗೂಡಿ ಮದ್ಯದಂಗಡಿಯ ಮಾಲಕನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹಲ್ಲೆಯಿಂದ ಗಾಯಗೊಂಡಿರುವ ಕೆಂಗೇರಿಯ ಮೈಸೂರು ರಸ್ತೆಯ ಬಾರ್ ಮತ್ತು ರೆಸ್ಟೋರೆಂಟ್ನ ಮಾಲಕ ಮಂಜು(32) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಶುಕ್ರವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ ಎಂದು ಮಂಜು ದೂರಿನಲ್ಲಿ ಉಲ್ಲೇಖಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮದ್ಯದಂಗಡಿಯಲ್ಲಿದ್ದ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story