ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರೈಲು ಸೇವೆ ಆರಂಭ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
ಬೆಂಗಳೂರು, ಜ. 4: ಇಂದಿನಿಂದ ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ದೇವನಹಳ್ಳಿ ಹಾಲ್ಟ್ ಸ್ಟೇಶನ್ ಮತ್ತು ಬೆಂಗಳೂರು ನಗರ ಮಧ್ಯೆ ರೈಲು ಸೇವೆ ಆರಂಭಗೊಂಡಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಇಂದಿಲ್ಲಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬೆಂಗಳೂರು ನಗರದ ರೈಲ್ವೆ ನಿಲ್ದಾಣಕ್ಕೆ ನೇರವಾಗಿ ರೈಲ್ವೆ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಇರಲಿಲ್ಲ. ಇದರಿಂದ ಬೆಂಗಳೂರು ಬಳ್ಳಾರಿ ರಸ್ತೆ ಮತ್ತು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿನ ಸಂಚಾರ ದಟ್ಟಣೆ ತಗ್ಗಲಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಸದಾನಂದಗೌಡ ಅವರು, ಇದರಿಂದ ಪ್ರಯಾಣದ ವೆಚ್ಚ, ಸಮಯ, ಶ್ರಮ ತುಂಬಾನೇ ಉಳಿಯಲಿದೆ. ನಗರದ ವಾಹನ ದಟ್ಟಣೆಯೂ ಕಡಿಮೆಯಾಗಲಿದೆ. ನೂತನ ವ್ಯವಸ್ಥೆ ಕಲ್ಪಿಸಲು ನೆರವಾದ ಕೇಂದ್ರ ರೈಲ್ವೆ ಸಚಿವ ಸೇರಿದಂತೆ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಇದೇ ವೇಳೆ ಧನ್ಯವಾದಗಳನ್ನು ತಿಳಿಸಿದ್ದಾರೆ.
Next Story