ದಿಲ್ಲಿ ರೈತರ ಹೋರಾಟ ಬೆಂಬಲಿಸಿ ಬೆಂಗಳೂರಿನ ವಿವಿಧೆಡೆ ಪೋಸ್ಟರ್ ಪ್ರದರ್ಶನ
ಬೆಂಗಳೂರು, ಜ. 18: ಕೃಷಿ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ದಿಲ್ಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಎಐಎಂಎಸ್ಎಸ್ ಕಾರ್ಯಕರ್ತೆಯರು ನಗರದ ವಿವಿಧೆಡೆಗಳಲ್ಲಿ ಪೋಸ್ಟರ್ ಪ್ರದರ್ಶನ ಚಳವಳಿ ನಡೆಸಿದರು.
ಸೋಮವಾರ ಎಐಎಂಎಸ್ಎಸ್ ಬೆಂಗಳೂರು ಜಿಲ್ಲಾ ಸಮಿತಿ ವತಿಯಿಂದ ವಿವಿಧ ಬಡಾವಣೆ, ಮಾರುಕಟ್ಟೆಗಳಲ್ಲಿ ಪ್ರಚಾರ ಕಾರ್ಯಕ್ರಮಗಳು, ಆನ್ಲೈನ್ ಪೋಸ್ಟರ್ ಪ್ರಚಾರ, ಬೀದಿಬದಿ ಸಭೆಗಳನ್ನು ನಡೆಸಿ ದಿಲ್ಲಿಯಲ್ಲಿ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಲು ಮನವಿ ಮಾಡಿದರು.
ಕೇಂದ್ರ ಸರಕಾರ ಕಾರ್ಪೋರೇಟ್ ಕಂಪೆನಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದಿದ್ದು, ಕೂಡಲೇ ಈ ತಿದ್ದುಪಡಿ ಹಿಂಪಡೆಯಬೇಕು. ಇಲ್ಲವಾದರೆ ರೈತರ ಹೋರಾಟ ಮತ್ತಷ್ಟು ತೀವ್ರಗೊಳಿಸಲಾಗುವುದೆಂದು ಕಾರ್ಯಕರ್ತೆಯರು ಎಚ್ಚರಿಕೆ ನೀಡಿದರು.
Next Story