ಝಮೀರ್ ಅಹ್ಮದ್ ಪುತ್ರಿ ವಿವಾಹದಲ್ಲಿ ಯಡಿಯೂರಪ್ಪ, ಬಿಜೆಪಿ ನಾಯಕರು ಭಾಗಿ
ಬೆಂಗಳೂರು, ಜ.22: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಝಮೀರ್ ಅಹ್ಮದ್ ಖಾನ್ ಪುತ್ರಿ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದರು.
ನಿನ್ನೆ ಸಂಜೆ ನಗರದ ಬೆಂಗಳೂರು ಅರಮನೆಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಬೈರತಿ ಬಸವರಾಜು, ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.
ಅದೇ ರೀತಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೃಷ್ಣೇ ಭೈರೇಗೌಡ, ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಶುಭ ಹಾರೈಸಿದರು.
Next Story