ಬೆಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಸಿಲಿಂಡರ್ ಹಿಡಿದು ಪ್ರತಿಭಟನೆ
ಬೆಂಗಳೂರು : ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಗರದ ಕೇಂದ್ರ ರೈಲ್ವೆ ನಿಲ್ದಾಣದಿಂದ ಇಲ್ಲಿನ ಮೌರ್ಯ ವೃತ್ತ ಬಳಿಯ ಗಾಂಧಿ ಪ್ರತಿಮೆ ವರೆಗೆ ಬೃಹತ್ ರ್ಯಾಲಿ ನಡೆಸಲಾಯಿತು.
ಕೂಡಲೆ ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.
ಶಾಸಕರಾದ ಸೌಮ್ಯ ರೆಡ್ಡಿ, ಅಂಜಲಿ ನಿಂಬಾಳ್ಕರ್, ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ತಲೆಯ ಮೇಲೆ ಖಾಲಿ ಸಿಲಿಂಡರ್ ಹೊತ್ತು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ರ್ಯಾಲಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್, ಮಾಜಿ ಸಚಿವ ಕೃಷ್ಣ ಬೈರೇಗೌಡ ಭಾಗವಹಿಸಿದ್ದರು.