ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಭಾಗಿ ಆರೋಪ: ಕಾನ್ಸ್ಟೇಬಲ್ ಅಮಾನತು
ಬೆಂಗಳೂರು, ಮಾ.9: ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶಿವಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಆದೇಶ ಹೊರಡಿಸಿದ್ದಾರೆ.
ಇತ್ತೀಚಿಗೆ ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಅವರ ವಿಚಾರಣೆಗೊಳಪಡಿಸಿದಾಗ ಕಾನ್ಸ್ಟೇಬಲ್ ಭಾಗಿಯಾಗಿರುವುದಕ್ಕೆ ಪುರಾವೆಗಳು ಸಿಕ್ಕಿದ್ದವು.
ಪ್ರಾಥಮಿಕ ಮಾಹಿತಿ ಅನ್ವಯ ಉತ್ತರ ವಿಭಾಗದ ಡಿಸಿಪಿ ಧಮೇರ್ಂದ್ರಕುಮಾರ್ ಮೀನಾ ಅವರು ವರದಿ ನೀಡಿದ್ದರು. ಅದನ್ನು ಪರಿಶೀಲನೆ ನಡೆಸಿದ ಸಂಜೀವ್ ಪಾಟೀಲ ಅವರು ಕಾನ್ಸ್ಟೇಬಲ್ನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Next Story