ಬೆಂಗಳೂರು: ಬಸ್ ಗಾಗಿ ಕಾದು ಕುಳಿತಿದ್ದ ವಿಕಲಚೇತನ ವ್ಯಕ್ತಿ ಕುಸಿದುಬಿದ್ದು ಮೃತ್ಯು
ಬೆಂಗಳೂರು, ಎ.7: ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾದು ಕುಳಿತಿದ್ದ ವಿಕಲಚೇತನ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ಆನೇಕಲ್ನ ಚಿಕ್ಕನಹಳ್ಳಿ ನಿವಾಸಿ ಚೆನ್ನಪ್ಪ ಎಂಬಾತ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಬುಧವಾರ ಬೆಳಗ್ಗೆ ಸುಮಾರಿಗೆ ಜಿಗಣಿಯಿಂದ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ಚೆನ್ನಪ್ಪ, ತನಗೆ ಸುಸ್ತಾಗಿರುವುದಾಗಿ ಬಿಎಂಟಿಸಿ ಸಿಬ್ಬಂದಿಗೆ ತಿಳಿಸಿದ್ದರು. ಬಳಿಕ ಸಿಬ್ಬಂದಿ ಅವರಿಗೆ ನಿಲ್ದಾಣದಲ್ಲೇ ಕೂರಿಸಿದ್ದರು. ಕೆಲ ಹೊತ್ತಿನ ಬಳಿಕ ಆ ವ್ಯಕ್ತಿ ಹೃದಯಾಘಾತದಿಂದ ಕೂತಲ್ಲೇ ಕುಸಿದು ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ಕರೆ ಮಾಡಿ, ವಿಷಯ ತಿಳಿಸಿದ್ದಾರೆ. ಸದ್ಯ, ಚಿರಶಾಂತಿ ವಾಹನದಲ್ಲಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳೀಯ ಬಿಎಂಟಿಸಿ ಸಿಬ್ಬಂದಿ ಹೇಳಿದ್ದಾರೆ.
Next Story