ಇಂದಿರಾ ಕ್ಯಾಂಟೀನ್ನಲ್ಲಿ ಉಚಿತ ಆಹಾರ ಪಡೆಯಲು ಗುರುತಿನ ಚೀಟಿ ಕಡ್ಡಾಯವಲ್ಲ: ಗೌರವ್ ಗುಪ್ತ
ಬೆಂಗಳೂರು, ಮೇ 12: ಬಿಬಿಎಂಪಿ ವ್ಯಾಪ್ತಿಯ ಎಲ್ಲ ಇಂದಿರಾ ಕ್ಯಾಂಟೀನ್ ಮೂಲಕ ಆಹಾರ ಪೊಟ್ಟಣ ವಿತರಣೆಗೆ ಯಾವುದೇ ಗುರುತಿನ ಚೀಟಿ ಕಡ್ಡಾಯವಲ್ಲವೆಂದು ಮುಖ್ಯ ಆಯುಕ್ತ ಗೌರವ್ಗುಪ್ತ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಂದಿರಾ ಕ್ಯಾಂಟೀನ್ನಲ್ಲಿ ಆಹಾರದ ಪೊಟ್ಟಣಗಳನ್ನು ಪಡೆಯಲು ಬರುವ ಫಲಾನುಭವಿಗಳು ಯಾವುದಾದರೊಂದು ಗುರುತಿನ ಚೀಟಿಯನ್ನು ಸರಬರಾಜುದಾರರಿಗೆ ಒದಗಿಸಿ ಆಹಾರದ ಪೊಟ್ಟಣಗಳನ್ನು ಪಡೆಯಬೇಕು ಎಂದು ತಿಳಿಸಲಾಗಿತ್ತು. ಆದರೆ, ಅರ್ಹ ಫಲಾನುಭವಿಗಳು ಗುರುತಿನ ಚೀಟಿ ತೋರಿಸಿ ಆಹಾರ ಪೊಟ್ಟಣಗಳನ್ನು ಪಡೆಯುವುದು ಸಮಸ್ಯೆ ಆಗುತ್ತಿರುವುದರಿಂದ ಇನ್ನು ಮುಂದೆ ಆಹಾರ ಪೊಟ್ಟಣ ಪಡೆಯಲು ಗುರುತಿನ ಚೀಟಿ ಕಡ್ಡಾಯವಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
Next Story