ಸ್ಮಶಾನ ಕಾರ್ಮಿಕರ ತಕ್ಷಣದ ಹಾಗೂ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸಲು ನಟ ಚೇತನ್ ಒತ್ತಾಯ
ಮುಖ್ಯಮಂತ್ರಿ, ಸಮಾಜ ಕಲ್ಯಾಣ ಸಚಿವರಿಗೆ ಪತ್ರ
ಬೆಂಗಳೂರು, ಮೇ 17: ಕೋವಿಡ್ -19ನ ಈ ಘೋರ ಬಿಕ್ಕಟ್ಟಿನ ಸಂದರ್ಭದಲ್ಲಿ ಕರ್ನಾಟಕದಾದ್ಯಂತ ಸ್ಮಶಾನ ಕಾರ್ಮಿಕರು ಕೋವಿಡ್ ಮುಂಚೂಣಿ ಯೋಧರಾಗಿ ದಣಿವರಿಯದೆ ಮತ್ತು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಇವರು ಅಸಾಧರಣ ವೈದ್ಯಕೀಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ಈ ಕಾರ್ಮಿಕರ ತಕ್ಷಣದ ಹಾಗೂ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಸಾಮಾಜಿಕ ಹೋರಾಟಗಾರ, ಚಲನಚಿತ್ರ ನಟ ಚೇತನ್ ಸರಕಾರವನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ರಾಜ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರಿಗೆ ಪತ್ರ ಬರೆದಿರುವ ಚೇತನ್ ಅವರು, ಸ್ಮಶಾನ/ಶವಾಗಾರ ಕಾರ್ಮಿಕರು ತಲೆಮಾರುಗಳಿಂದ ನಮ್ಮ ಸಮಾಜದ ಸಾಮಾಜಿಕ ಹಾಗೂ ಆರ್ಥಿಕವಾಗಿ ಅಂಚಿನಲ್ಲಿರುವ ಸದಸ್ಯರು. ಈ ಸಾಂಕ್ರಾಮಿಕ ರೋಗ ಹರಡುತ್ತಿರುವ ಸಂಧರ್ಭದಲ್ಲಿ ಅಸಾಧರಣ ವೈದ್ಯಕೀಯ ಅಪಾಯಗಳನ್ನು ಎದುರಿಸುತ್ತಿದ್ದಾರೆ. ಆದರೂ ಅವರ ತಕ್ಷಣದ ಮತ್ತು ದೀರ್ಘಕಾಲದ ಅಗತ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸರ್ಕಾರಗಳು ಸತತವಾಗಿ ನಿರ್ಲಕ್ಷಿಸಿವೆ. ಆದ್ದರಿಂದ ಅವರ ತಕ್ಷಣದ ಅಗತ್ಯಗಳನ್ನು ಪೂರೈಸಬೇಕು ಹಾಗೂ ಅವರ ಬೇಡಿಕೆಗಳಿಗೆ ಶಾಶ್ವತ ಪರಿಹಾರಗಳು ಕಲ್ಪಿಸಬೇಕು ಎಂದು ಕೇಳಿಕೊಂಡಿದ್ದಾರೆ.
ನಮ್ಮ ರಾಜ್ಯ ಸರ್ಕಾರಕ್ಕೆ ಈ ಮುಕ್ತ ಪತ್ರದ ಮೂಲಕ, ನಮ್ಮ ಸ್ಮಶಾನ ಕಾರ್ಮಿಕರ ತಕ್ಷಣದ & ದೀರ್ಘಕಾಲದ ಬೇಡಿಕೆಗಳನ್ನು ಅನುಷ್ಠಾನಗೊಳಿಸಲು ನಾನು ವಿನಂತಿಸುತ್ತಿದ್ದೇನೆ
— Chetan Kumar / ಚೇತನ್ (@ChetanAhimsa) May 17, 2021
Through this open letter to KA govt, I am requesting implementatn of immediate & long-term demands of #crematoriumworkers@BSYBJP @sriramulubjp pic.twitter.com/K0k6EIJ8wj