ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ವಿಚಾರಣೆಗೆ ಹಾಜರಾದ ನಟ ಚೇತನ್
ಬೆಂಗಳೂರು, ಜೂ.15: ಬ್ರಾಹ್ಮಣರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಬುಧವಾರ ವಿಚಾರಣೆಗೆ ಹಾಜರಾಗಿದ್ದಾರೆ.
ತಮ್ಮ ಸ್ನೇಹಿತರು ಹಾಗೂ ವಕೀಲರೊಂದಿಗೆ ಚೇತನ್ ಬಸವನಗುಡಿ ಇನ್ಸ್ಪೆಕ್ಟರ್ ರಮೇಶ್ ಅವರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.
ಬ್ರಾಹ್ಮಣರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್ ಕುಮಾರ್ ಶರ್ಮಾ ಎಂಬುವರು ಚೇತನ್ ವಿರುದ್ಧ ದೂರು ನೀಡಿದ್ದರು. ದೂರಿನ ಅನ್ವಯ ಧಾರ್ಮಿಕ ಭಾವನೆ ಕೆರಳಿಸುವುದು (ಐಪಿಸಿ 129(ಎ) ಹಾಗೂ ದ್ವೇಷ ಭಾವನೆ ಹೆಚ್ಚಿಸುವ (ಐಪಿಸಿ 153 (ಬಿ) ಆರೋಪದಡಿ ಎಫ್ಐಆರ್ ದಾಖಲಾಗಿತ್ತು.
Next Story