ಬೆಂಗಳೂರು: ಸರಗಳ್ಳತನ; ಆರೋಪಿಗಳ ಬಂಧನ
ಬೆಂಗಳೂರು, ಜು.6: ಮಹಿಳೆಯೊಬ್ಬರ ಚಿನ್ನದ ಸರ ಕಳವು ಮಾಡಿ ಪರಾರಿಯಾಗಿದ್ದ ಆರೋಪ ಪ್ರಕರಣ ಸಂಬಂಧ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ರಾಜರಾಜೇಶ್ವರಿ ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳಿಬ್ಬರು ಸೋಮವಾರ ಬೆಳಗ್ಗೆ ಬೆಮೆಲ್ ಲೇಔಟ್ನ ವಿವೇಕಾನಂದ ಪಾರ್ಕ್ ಬಳಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಕಸಿದು ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಇನ್ಸ್ಪೆಕ್ಟರ್ ಶಿವಣ್ಣ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡು ಸಂಜೆಯೇ ಆರೋಪಿಗಳನ್ನು ಬಂಧಿಸಿ ಚಿನ್ನದ ಸರ, ಬೈಕ್ನ್ನು ಜಪ್ತಿ ಮಾಡಿದ್ದಾರೆ ಎಂದು ಡಿಸಿಪಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
Next Story