ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಸರಿ ಸಮಾನರು: ಎಡಿಜಿಪಿ ಭಾಸ್ಕರ್ ರಾವ್
ಬೆಂಗಳೂರು, ಜು.28: ಇಂದಿನ ದಿನಗಳಲ್ಲಿ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಪುರುಷರಷ್ಟೇ ಸರಿಸಮಾನಾಗಿ ಬೆಳೆಯುತ್ತಿದ್ದಾರೆ ಎಂದು ರೈಲ್ವೇ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ತಿಳಿಸಿದರು.
ಇಲ್ಲಿನ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆ ಹಮ್ಮಿಕೊಂಡಿದ್ದ, ಮಹಿಳೆಯರ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರು ಹೆಚ್ಚು ಸ್ವಾವಲಂಬಿಗಳಾಗಬೇಕು. ಸಾಧಿಸಬೇಕು ಎಂಬ ಛಲ ಮತ್ತು ಸಕಾರಾತ್ಮಕ ಭಾವನೆಗಳನ್ನು ಬೆಳಸಿಕೊಂಡರೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಅರ್ಥ ಬಂದೀತು ಎಂದು ಅವರು ನುಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಎಂ.ವೆಂಕಟೇಶ ಶೇಷಾದ್ರಿ, ರಾಷ್ಟ್ರೀಯ ರುಡ್ ಸೆಟ್ ಅಕಾಡೆಮಿಯ ಮಹಾ ನಿರ್ದೇಶಕ ಸತೀಯಾ ಮೂರ್ತಿ, ಕೆನರಾ ಬ್ಯಾಂಕಿನ ಪ್ರಬಂಧಕರಾದ ಶಿಲ್ಪಕಲಾ, ಸಂಸ್ಥೆಯ ಅಧ್ಯಾಪಕ ವೆಂಕಟೇಶ ಬಾಬು, ಅನುಶ್ರೀ ಸೇರಿದಂತೆ ಪ್ರಮುಖರಿದ್ದರು.
Next Story