ಸಿನೆಮಾ ನಿರ್ಮಾಪಕನ ಮನೆಯಲ್ಲಿ ಕಳವು ಪ್ರಕರಣ: ಆರೋಪಿ ಸೆರೆ
ಬೆಂಗಳೂರು, ಜು.29: ಕನ್ನಡ ಚಿತ್ರರಂಗದ ನಿರ್ಮಾಪಕ ರಮೇಶ್ ಕಶ್ಯಪ್ ಅವರ ಮನೆಯಲ್ಲಿ ನಗದು ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪ ಸಂಬಂಧ ಕಾರು ಚಾಲಕ ಸೇರಿ ಇಬ್ಬರು ಆರೋಪಿಗಳನ್ನು ಹನುಮಂತನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಾರು ಚಾಲಕ ಅಭಿಷೇಕ್ ಹಾಗೂ ಚಂದ್ರಶೇಖರ್ ಬಂಧಿತ ಆರೋಪಿಗಳೆಂದು ಪೊಲೀಸರು ಹೇಳಿದ್ದಾರೆ.
ನಿರ್ಮಾಪಕ ಕಶ್ಯಪ್ ಅವರ ಕಾರು ಚಾಲಕನಾಗಿದ್ದ ಆರೋಪಿ ಅಭಿಷೇಕ್, ಜು.10ರಂದು ಹನುಮಂತನಗರದ ನಿರ್ಮಾಪಕ ರಮೇಶ್ ಕಶ್ಯಪ್ ಮನೆಯಲ್ಲಿ 3 ಲಕ್ಷ ರೂ. ನಗದು, 710 ಗ್ರಾಂ ಚಿನ್ನಾಭರಣವನ್ನು ಸ್ನೇಹಿತ ಚಂದ್ರಶೇಖರ್ ಜೊತೆ ಸೇರಿ ಕಳವು ಮಾಡಿದ್ದ. ಈ ಕೃತ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ದೂರು ದಾಖಲಿಸಿಕೊಂಡು ಪೊಲೀಸರು ಕಾರ್ಯಾಚರಣೆ ಕೈಗೊಂಡು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Next Story