ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ಬಳಿ ವ್ಹೀಲಿಂಗ್ ಮಾಡಿದ ಆರೋಪದಲ್ಲಿ ಮೂವರ ಬಂಧನ
ಬೆಂಗಳೂರು, ಜು.29: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್ಟಿ. ನಗರದ ಮನೆ ಮುಂದೆ ಅಪಾಯಕಾರಿ ವ್ಹೀಲಿಂಗ್ ಮಾಡಿದ ಆರೋಪ ಸಂಬಂಧ ಮೂವರನ್ನು ಆರ್ ಟಿ ನಗರ ಸಂಚಾರ ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿಗಳ ನಿವಾಸದ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಇರುವುದನ್ನು ಲೆಕ್ಕಿಸದೇ ಅಪಾಯಕಾರಿ ವ್ಹೀಲಿಂಗ್ ಮಾಡಿದ ಆರೋಪ ಸಂಬಂಧ ಮೂವರನ್ನು ಬಂಧಿಸಿ ಸ್ಕೂಟರ್ ಗಳನ್ನು ವಶಕ್ಕೆ ಪಡೆದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Next Story