ಬೆಂಗಳೂರು: ರೌಡಿಗಳ ಮನೆ ಮೇಲೆ ದಾಳಿ
ಬೆಂಗಳೂರು, ಜು. 31: ಗಂಭೀರ ಅಪರಾಧ ಆರೋಪ ಪ್ರಕರಣಗಳಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ಆಗ್ನೇಯ ವಿಭಾಗದ ಪೊಲೀಸರು ಶನಿವಾರ ಮುಂಜಾನೆ ದಾಳಿ ನಡೆಸಿದ್ದಾರೆ.
ನಗರದ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ 63 ರೌಡಿಶೀಟರ್ಗಳ ಮನೆ ಮೇಲೆ ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಮಹದೇವ ಜೋಶಿ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಳ್ಳಲಾಗಿದೆ.
ರೌಡಿಗಳಾದ ಸುಜೀತ್, ತೇಜಸ್, ಕಿಶೋರ್, ಸುರೇಶ್, ಅತಾವುಲ್ಲಾ, ಆನಂದ್, ಗೌತಮ್, ಮಣಿಕಾಂತ್, ಆನಂದ್, ಶಿವ, ಅಂಬರೀಶ್, ವೆಂಕಟೇಶ್ ಸೇರಿದಂತೆ 63 ರೌಡಿ ಶೀಟರ್ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
ದಾಳಿಯಲ್ಲಿ 18 ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದು, ದಾಳಿಯಲ್ಲಿ ಯಾವುದೇ ರೀತಿಯ ಮಾರಕಾಸ್ತ್ರಗಳು ದೊರೆತಿಲ್ಲ ಎಂದು ಡಿಸಿಪಿ ಹೇಳಿದ್ದಾರೆ.
Next Story