ರಸ್ತೆ ಗುಂಡಿ ಅನಾಹುತ: ಎಫ್ಐಆರ್ ದಾಖಲು
ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಹಾಗೂ ಪಂಚಾಯತ್ ಅಧಿಕಾರಿಗಳ ವಿರುದ್ಧ ಇಲ್ಲಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿ ಬಳಿ ಶುಕ್ರವಾರ ರಸ್ತೆಗುಂಡಿ ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಯುವತಿ ಮೃತಪಟ್ಟಿದ್ದರು.
ಈ ಹಿನ್ನೆಲೆಯಲ್ಲಿ ನಿನ್ನೆ ನಡೆದ ಅಪಘಾತ ಪ್ರಕರಣದಲ್ಲಿ ಟಿಪ್ಪರ್ ಚಾಲಕನ ಜೊತೆ ಅಧಿಕಾರಿಗಳನ್ನು ಸಹ ಪೊಲೀಸರು ಆರೋಪಿಗಳನ್ನಾಗಿ ಪರಿಗಣಿಸಿದ್ದಾರೆ. ಪ್ರಕರಣ ಸಂಬಂಧ ಟಿಪ್ಪರ್ ಚಾಲಕ, ಲೋಕೋಪಯೋಗಿ ಅಧಿಕಾರಿ, ಪಂಚಾಯತ್ ಅಧಿಕಾರಿ ವಿರುದ್ಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story