ಬೆಂಗಳೂರು: ಕಲುಷಿತ ನೀರು ಸೇವಿಸಿ 20ಕ್ಕೂ ಅಧಿಕ ಮಂದಿ ಅಸ್ವಸ್ಥ
ಸಾಂದರ್ಭಿಕ ಚಿತ್ರ
ಬೆಂಗಳೂರು, ನ.15: ಒಳಚರಂಡಿ ಮಿಶ್ರಿತ ಕಲುಷಿತಗೊಂಡ ಕುಡಿಯುವ ನೀರು ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಎಚ್ಬಿಆರ್ ಲೇಔಟ್ನ ಟೆಲಿಕಾಂ ಬಡಾವಣೆಯಲ್ಲಿ ವರದಿಯಾಗಿದೆ.
ಕಲುಷಿತಗೊಂಡ ಕುಡಿಯುವ ನೀರು ಸೇವಿಸಿ ಅಸ್ವಸ್ಥರಾದ 20ಕ್ಕೂ ಹೆಚ್ಚು ಮಂದಿಯಲ್ಲಿ ಬಹುತೇಕ ಎಲ್ಲರೂ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಾವೇರಿ ಕುಡಿಯುವ ನೀರಿಗೆ ಒಳಚರಂಡಿ ನೀರು ಮಿಶ್ರಣವಾಗಿರುವುದನ್ನು ತಿಳಿಯದೇ ಕುಡಿದ ಜನರು ವಾಂತಿಭೇದಿಯಾಗಿ ಅಸ್ವಸ್ಥಗೊಂಡಿದ್ದು, ಹಲವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿಕಿತ್ಸೆ ಪಡೆಯುತ್ತಿರುವವರ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಇದರ ನಡುವೆ ಅಸ್ವಸ್ಥಗೊಂಡು ಚಿಕಿತ್ಸೆ ಪಡೆದ ಒಬ್ಬರಿಗೆ 5 ದಿನಕ್ಕೆ 50 ಸಾವಿರ ಬಿಲ್ ಮಾಡಲಾಗಿದೆ ಎಂದು ಖಾಸಗಿ ಆಸ್ಪತ್ರೆಯ ವಿರುದ್ಧ ಆರೋಪ ಕೇಳಿಬಂದಿದೆ.
Next Story