ಬೆಂಗಳೂರು: ಪಿಸ್ತೂಲು ತೋರಿಸಿ ದರೋಡೆ; ಐವರ ಬಂಧನ
ಬೆಂಗಳೂರು, ನ.20: ಲಾಕ್ಡೌನ್ ಸಂದರ್ಭದಲ್ಲಿ ಪಿಸ್ತೂಲು ತೋರಿಸಿ ದರೋಡೆ ಮಾಡಿದ್ದ ಆರೋಪದಡಿ ಐವರನ್ನು ಬಂಧಿಸಿರುವ ಕೊಡಿಗೇಹಳ್ಳಿ ಠಾಣೆ ಪೊಲೀಸರು, ಸುಮಾರು 25 ಲಕ್ಷ ರೂ. ಮೌಲ್ಯದ 650 ಗ್ರಾಂ ತೂಕದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
ಲಾಕ್ಡೌನ್ ಸಂದರ್ಭದಲ್ಲಿ ದಾಖಲಾಗಿದ್ದ ಕಳವು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಕೊಡಿಗೇಹಳ್ಳಿ ಪೊಲೀಸರು ಪೂರ್ವವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಅವರ ಸೂಚನೆಯಂತೆ ಯಲಹಂಕ ಉಪವಿಭಾಗದ ಎಸಿಪಿ ಮನೋಜ್ ಅವರ ನೇತೃತ್ವದಲ್ಲಿ ಸಿಬ್ಬಂದಿಯನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸಂಜೆ ಸಮಯದಲ್ಲಿ ಐದು ಮಂದಿ ದರೋಡೆಕೋರರು ಮನೆಗೆ ನುಗ್ಗಿ ಪಿಸ್ತೂಲು ತೋರಿಸಿ ಚಿನ್ನಾಭರಣಗಳನ್ನು ದರೋಡೆ ಮಾಡಿಕೊಂಡು ಹೋಗಿದ್ದ ಪ್ರಕರಣ ಹಾಗೂ ಏಳು ಕಡೆ ಕನ್ನಗಳವು ಪ್ರಕರಣಗಳು ಸೇರಿದಂತೆ ಒಟ್ಟು 8 ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ತನಿಖಾ ತಂಡವು ಯಶಸ್ವಿಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.
Next Story