ವಕ್ಫ್ ಮಂಡಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ
ಬೆಂಗಳೂರು, ಡಿ. 8: ‘ಕೋವಿಡ್ ರೂಪಾಂತರಿಸೋಂಕು ತೀವ್ರತರವಾಗಿ ಹೆಚ್ಚಾಗುತ್ತಿದ್ದು, ಬೆಂಗಳೂರು ನಗರದಲ್ಲಿ ಪ್ರತಿದಿನ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿನ ಹರಡುವಿಕೆ ನಿಯಂತ್ರಿಸಲು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸಿಬ್ಬಂದಿ ಹಾಗೂ ಜನರ ಆರೋಗ್ಯದ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕಚೇರಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಸಾರ್ವಜನಿಕರು ತಮ್ಮ ಕುಂದು-ಕೊರತೆಗಳ ವಿಚಾರಣೆಗೆ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ದೂ.ಸಂಖ್ಯೆ: 080-22264594/95, ಮೊ.ಸಂಖ್ಯೆ: 9449848560 ಅಥವಾ ಇಮೇಲ್ info@karwakf.org ಮುಖಾಂತರ ಕಛೇರಿ ಸಮಯದ ಅವಧಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಂಡಳಿಯ ಅಧಿಕೃತ ಪ್ರಕಟಣೆ ಕೋರಿದೆ.
Next Story