ಯಡಿಯೂರಪ್ಪರನ್ನು ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
photo: @CMofKarnataka
ಬೆಂಗಳೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಚ ನೀಡಿ ಶುಭ ಕೋರಿದರು.
ಹಿರಿಯ ಅಧಿಕಾರಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ ಸಿಎಂ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಹೊಸ ವರ್ಷದ ಶುಭಾಶಯಗಳನ್ನು ಕೋರಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ರಾಜ್ಯ ಪೊಲೀಸ ಮಹಾ ನಿರ್ದೇಶಕ ಪ್ರವೀಣ ಸೂದ್ ಮತ್ತು ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯಮಂತ್ರಿ @BSBommai ಅವರು ಇಂದು ನಿಕಟಪೂರ್ವ ಮುಖ್ಯಮಂತ್ರಿಗಳಾದ @BSYBJP ಅವರನ್ನು ಭೇಟಿಯಾಗಿ ಹೊಸ ವರ್ಷದ ಶುಭಾಶಯಗಳನ್ನು ಕೋರಿದರು. pic.twitter.com/OSTpFmbPZD
— CM of Karnataka (@CMofKarnataka) January 1, 2022