ಮೇಕೆದಾಟು ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೆ ಬಿಬಿಎಂಪಿ ನೀಡಿದ್ದ ಅನುಮತಿ ರದ್ದು
ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದ್ದು, ಜ.19ರಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಸಮಾರೋಪ ಸಮಾರಂಭಕ್ಕೆ ಬಿಬಿಎಂಪಿ ನೀಡಿದ್ದ ಅನುಮತಿ ರದ್ದುಗೊಳಿಸಿದೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಪತ್ರ ಬರೆದಿರುವ ಬಿಬಿಎಂಪಿ ಅಧಿಕಾರಿಗಳು, ಪ್ರಸ್ತುತ ರಾಜ್ಯದಲ್ಲಿ ಹಾಗೂ ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರಕಾರದ ಆದೇಶ ಹಾಗೂ ಮಾರ್ಗಸೂಚಿಗಳಂತೆ ಪೂರ್ವಭಾವಿಯಾಗಿ ಹೆಚ್ಚುವರಿಯಾಗಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದೆ.
ಆದ್ದರಿಂದ ದಿನಾಂಕ ಜ.18 ಹಾಗೂ 19ರಂದು ಬಸವನಗುಡಿ ನ್ಯಾಷನಲ್ ಕಾಲೇಜು ಪಕ್ಕದ ಪಾಲಿಕೆಯ ಆಟದ ಮೈದಾನದಲ್ಲಿ ಪಾದಯಾತ್ರೆಯ ಸಮಾಪನಾ ಕಾರ್ಯಕ್ರಮಕ್ಕೆ ನೀಡಲಾಗಿದ್ದ ಅನುಮತಿಯನ್ನು ರದ್ದುಪಡಿಸಿದೆ ಎಂದು ಪತ್ರದಲ್ಲಿ ತಿಳಿಸಿದೆ.
Next Story