ಸಿ.ಎಂ.ಇಬ್ರಾಹೀಂ ಜೆಡಿಎಸ್ ಗೆ ಬಂದರೆ ಸ್ವಾಗತ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಜ.27: ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹೀಂ ಅವರು ಕಾಂಗ್ರೆಸ್ ಪಕ್ಷ ತೊರೆಯುವ ಬೆನ್ನಲ್ಲೆ ಅವರು ಮತ್ತೆ ಜೆಡಿಎಸ್ ಗೆ ಬರುವುದಾದರೆ ಸ್ವಾಗತ ಎಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಇಬ್ರಾಹೀಂ ಅವರು ದೇವೇಗೌಡರ ಜತೆ ಹಲವು ವರ್ಷಗಳ ಸಖ್ಯ ಹೊಂದಿದ್ದರು. ಇಬ್ರಾಹೀಂಗೆ ಜೆಡಿಎಸ್ ಮೇಲೆ ವ್ಯಾಮೋಹವಿದೆ.ಈ ಜಾತ್ಯತೀತ ಪಕ್ಷ ಉಳಿಯಬೇಕೆಂದು ಅವರು ಬಯಸುತ್ತಾರೆ. ಆದ್ದರಿಂದ ಅವರು ಪಕ್ಷಕ್ಕೆ ಬರುವುದಾದರೆ ಮುಕ್ತ ಆಹ್ವಾನವಿದೆ. ಇಂದು ಬೆಳಗ್ಗೆಯೂ ಸಿ.ಎಂ.ಇಬ್ರಾಹೀಂ ಜತೆ ಮಾತನಾಡಿದ್ದೇನೆ ಎಂದು ಹೇಳಿದರು.
Next Story