ತನ್ನ ನೇತೃತ್ವದ ಸರಕಾರಕ್ಕೆ ಆರು ತಿಂಗಳು ತುಂಬಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಬೆಂಗಳೂರಿನಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಮುಖ್ಯಮಂತ್ರಿಗೆ ಯಡಿಯೂರಪ್ಪ  ಜನ್ಮದಿನದ ಶುಭಾಶಯ ಕೋರಿದರು.