'ಪ್ರಾಣ ಬೆದರಿಕೆ ಇದೆ, ರಕ್ಷಣೆ ನೀಡಿ': ಸಭಾಪತಿಗಳ ಬಳಿ ಮನವಿ ಮಾಡಿದ ಬಿ.ಕೆ. ಹರಿಪ್ರಸಾದ್
ಬಿ.ಕೆ. ಹರಿಪ್ರಸಾದ್
ಬೆಂಗಳೂರು, ಫೆ.18: ನನಗೆ ಪ್ರಾಣ ಬೆದರಿಕೆ ಇದೆ ನನಗೆ ರಕ್ಷಣೆ ನೀಡಬೇಕು ಎಂದು ಸಭಾಪತಿಗಳ ಬಳಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಮನವಿ ಮಾಡಿದರು.
ಶುಕ್ರವಾರ ವಿಧಾನ ಪರಿಷತ್ತಿನ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರಸ್ತಾಪಿಸಿದ ಅವರು, ನನಗೆ ಪ್ರಾಣ ಬೆದರಿಕೆ ಇದೆ ನನಗೆ ರಕ್ಷಣೆ ನೀಡಬೇಕು ಎಂದರು.
ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ತಮ್ಮ ಪಕ್ಷದವರಿಗೆ ಹರಿಪ್ರಸಾದ್ ಅವರನ್ನು ಎದುರಿಸುವ ಸಾಮಥ್ರ್ಯ ಬೆಳಸಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. ಎದುರಿಸುವುದು ಎಂದರೆ ಯಾವ ರೀತಿ, ಹಲವಾರು ರೀತಿಯಲ್ಲಿ ನನ್ನ ಮೇಲೆ ದಾಳಿ ಮಾಡಬಹುದೇ ಎಂದು ಪ್ರಶ್ನಿಸಿದರು.
ನನಗೆ ಪ್ರಾಣ ಬೆದರಿಕೆ ಇದೆ. ರಕ್ಷಣೆ ನೀಡುವಂತೆ ಸಭಾಪತಿಗೆ ಮೌಖಿಕವಾಗಿ ಮನವಿ ಮಾಡಿz್ದÉೀನೆ. ಮುಂದೆ ಪತ್ರದ ಮುಖೇನವೂ ಮನವಿ ಮಾಡುತ್ತೇನೆ ಎಂದು ಮಾಹಿತಿ ನೀಡಿದರು.
Next Story