ಬಿಬಿಎಂಪಿ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ನೇಮಕ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರಾಗಿದ್ದ ಗೌರವ್ ಗುಪ್ತಾ ಅವರನ್ನು ರಾಜ್ಯ ಸರ್ಕಾರ ಗುರುವಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಿದೆ.
ಗೌರವ್ ಗುಪ್ತಾ ಅವರನ್ನು ಮೂಲಕ ಸೌಕರ್ಯ ಅಭಿವೃದ್ಧಿ ಇಲಾಖೆ ಎಸಿಎಸ್ ಆಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ... ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿ 17 ಐಎಎಸ್ ಅಧಿಕಾರಿಗಳ ವರ್ಗಾವಣೆ
ಗೌರವ್ ಗುಪ್ತಾ ಸೇರಿದಂತೆ 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ಮನೋಜ್ ಜೈನ್ ನೇಮಕಗೊಂಡಿದ್ದಾರೆ.
Next Story