ಬೆಂಗಳೂರು | ಪಿಎಸ್ಸೈ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಆರೋಪಿ ಮನೆಯಲ್ಲಿ ನಗದು ಜಪ್ತಿ
ಬೆಂಗಳೂರು, ಮೇ 14: ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ತನಿಖೆ ಮುಂದುವರೆಸಿರುವ ಸಿಐಡಿ ಅಧಿಕಾರಿಗಳು, ಬಂಧಿತ ಆರೋಪಿಯ ಮನೆಯಲ್ಲಿ 20 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.
ಶನಿವಾರ ಇಲ್ಲಿನ ಬಸವೇಶ್ವರ ನಗರ ಶಾರದ ಕಾಲನಿಯಲ್ಲಿರುವ ಬಂಧಿತ ಆರೋಪಿ ಶ್ರೀಧರ್ ಮನೆಯಲ್ಲಿ ತಪಾಸಣೆ ನಡೆಸಿದಾಗ ಮನೆಯಲ್ಲಿ 20 ಲಕ್ಷ ನಗದು ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನೇಮಕಾತಿ ವಿಭಾಗದ ಪ್ರಥಮದರ್ಜೆ ನೌಕರನಾಗಿದ್ದ ಶ್ರೀಧರ್ ಮಧ್ಯವರ್ತಿಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ಆತನ ಬಂಧನವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Next Story