ಚೇತನಾ ರಾಜ್ ಸಾವು ಪ್ರಕರಣ: ಶಸ್ತ್ರಚಿಕಿತ್ಸೆಗೆ ಚಿನ್ನಾಭರಣ ಅಡವಿಟ್ಟಿದ್ದ ನಟಿ
ನಟಿ ಚೇತನಾ ರಾಜ್
ಬೆಂಗಳೂರು, ಮೇ 19: ಕಿರುತೆರೆ ನಟಿ ಚೇತನಾ ರಾಜ್ ಸಾವು ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದು, ಆಕೆ ಶಸ್ತ್ರಚಿಕಿತ್ಸೆಗೆ ಹಣ ಹೊಂದಿಸಲು ಚಿನ್ನಾಭರಣಗಳನ್ನು ಅಡವಿಟ್ಟಿದ್ದರು ಎಂಬ ವಿಚಾರ ತಿಳಿದುಬಂದಿದೆ.
ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿರುವ ಸುಬ್ರಮಣ್ಯನಗರ ಠಾಣಾ ಪೊಲೀಸರು, ಆಕೆಯ ಆಪ್ತ ವಲಯದಿಂದ ಮಾಹಿತಿ ಕಲೆ ಹಾಕುತ್ತಿದ್ದು, ಚಿನ್ನಾಭರಣ ಅಡವಿಟ್ಟು 80 ಸಾವಿರ ರೂಪಾಯಿ ಪಡೆದುಕೊಂಡಿದ್ದರು ಎಂಬ ವಿಚಾರ ಬಯಲಾಗಿದೆ.
ಮತ್ತೊಂದೆಡೆ, ಕಾಸ್ಮೆಟಿಕ್ ಸರ್ಜರಿ ಮಾಡಿದ್ದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಬೆಂಗಳೂರು ನಗರ ಆರೋಗ್ಯ ಇಲಾಖೆ ಬೀಗ ಜಡಿದಿದೆ. ಚೇತನಾ ಸಾವಿಗೆ ಸಂಬಂಧಿಸಿದಂತೆ ಸೂಕ್ತ ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸುಬ್ರಹ್ಮಣ್ಯ ನಗರಠಾಣಾ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
Next Story