ಚಿತ್ರಗಳು ಬರೀ ಮಾತಾಡುವುದಿಲ್ಲ, ಸತ್ಯವನ್ನೂ ಬೆತ್ತಲೆ ಮಾಡುತ್ತದೆ: ಶೆಟ್ಟರ್ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ತಿರುಗೇಟು
ಬೆಂಗಳೂರು, ಮೇ 23: 'ಟಿಪ್ಪು ಒಬ್ಬ ನರಭಕ್ಷಕ' ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೀಡಿರುವ ಹೇಳಿಕೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಟಿಪ್ಪುವಿನ ಪೋಷಾಕು ಧರಿಸಿ ಪೋಸು ನೀಡಿದ್ದನ್ನು ಜಗದೀಶ್ ಶೆಟ್ಟರ್ ಮರೆತಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಚಿತ್ರಗಳು ಬರೀ ಮಾತಾಡುವುದಿಲ್ಲ ಶೆಟ್ಟರ್ ಅವರೇ, ಸತ್ಯವನ್ನ ಬೆತ್ತಲೆ ಕೂಡ ಮಾಡುತ್ತೆ. ಕೋಮುವಾದದ ಕನ್ನಡಕ ಕಳಚಿಟ್ಟು ಓದುವುದಾದರೇ ತಾವೇ ಸಿಎಂ ಆಗಿದ್ದಾಗ ಪ್ರಕಟಿಸಿರುವ ಪುಸ್ತಕ ಕಳಿಸಿಕೊಡಬೇಕಾ? ಎಂದು ಪ್ರಶ್ನಿಸಿದ್ದಲ್ಲದೆ, ಜಗದೀಶ್ ಶೆಟ್ಟರ್ ಟಿಪ್ಪುವಿನ ವೇಷ ಧರಿಸಿದ್ದ ಫೋಟೋವನ್ನು ಕೂಡಾ ಟ್ವೀಟ್ ಮಾಡಿದ್ದಾರೆ.
"ಟಿಪ್ಪು ಒಬ್ಬ ನರಭಕ್ಷಕ"ಎಂದು @JagadishShettar ಹೇಳಿಕೆ ನೀಡಿದ್ದಾರೆ.ಹಾಗಾದ್ರೆ ಟಿಪ್ಪುವಿನ ಪೋಷಾಕು ಧರಿಸಿ ಪೋಸು ನೀಡಿದ್ದನ್ನ ಮರೆತಿರಬೇಕು.ಚಿತ್ರಗಳು ಬರೀ ಮಾತಾಡುವುದಿಲ್ಲ ಶೆಟ್ಟರ್ ಅವರೇ,ಸತ್ಯವನ್ನ ಬೆತ್ತಲೆ ಕೂಡ ಮಾಡುತ್ತೆ.
— Hariprasad.B.K. (@HariprasadBK2) May 23, 2022
ಕೋಮುವಾದದ ಕನ್ನಡಕ ಕಳಚಿಟ್ಟು ಓದುವುದಾದರೇ ತಾವೇ ಸಿಎಂ ಆಗಿದ್ದಾಗ ಪ್ರಕಟಿಸಿರುವ ಪುಸ್ತಕ ಕಳಿಸಿಕೊಡಬೇಕಾ? pic.twitter.com/SAgksvbyqX