Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತೃತೀಯ ರಂಗ ಬಲವರ್ಧನೆಗೆ ಯತ್ನ: ತೆಲಂಗಾಣ...

ತೃತೀಯ ರಂಗ ಬಲವರ್ಧನೆಗೆ ಯತ್ನ: ತೆಲಂಗಾಣ ಸಿಎಂ ಚಂದ್ರಶೇಖರರಾವ್- ಮಾಜಿ ಪ್ರಧಾನಿ ದೇವೇಗೌಡ ಭೇಟಿ

ವಾರ್ತಾಭಾರತಿವಾರ್ತಾಭಾರತಿ26 May 2022 4:31 PM IST
share
ತೃತೀಯ ರಂಗ ಬಲವರ್ಧನೆಗೆ ಯತ್ನ: ತೆಲಂಗಾಣ ಸಿಎಂ ಚಂದ್ರಶೇಖರರಾವ್- ಮಾಜಿ ಪ್ರಧಾನಿ ದೇವೇಗೌಡ ಭೇಟಿ

ಬೆಂಗಳೂರು, ಮೇ 26: ದೇಶದಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಹೊರತುಪಡಿಸಿ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಮೂಲಕ ತೃತೀಯ ರಂಗವನ್ನು ಬಲವರ್ಧನೆಗೊಳಿಸಲು ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರರಾವ್ ಪ್ರಯತ್ನಿಸುತ್ತಿದ್ದಾರೆ.

ಇದರ ಭಾಗವಾಗಿ ಗುರುವಾರ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಚಂದ್ರಶೇಖರರಾವ್, ತೃತೀಯ ರಂಗ ಸ್ಥಾಪನೆ ರಾಷ್ಟ್ರಪತಿ ಚುನಾವಣೆ, ಪಸಕ್ತ ರಾಜಕೀಯ ವಿದ್ಯಾಮಾನಗಳು ಹಾಗೂ ಮುಂಬರುವ ಲೋಕಸಭಾ ಚುನಾವಣೆಯನ್ನು ಯಾವ ರೀತಿ ಎದುರಿಸಬೇಕು ಎಂಬುದು ಸೇರಿದಂತೆ ಇನ್ನಿತರ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಿದರು.

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೂ ಕೆ.ಸಿ.ಚಂದ್ರಶೇಖರರಾವ್, ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಮೂಲಕ ತೃತೀಯ ರಂಗವನ್ನು ಬಲಪಡಿಸಲು ಪ್ರಯತ್ನಿಸಿದ್ದರು. ಆದರೆ, ಅವರ ಪ್ರಯತ್ನ ನಿರೀಕ್ಷಿತ ಯಶಸ್ಸು ಕಂಡಿರಲಿಲ್ಲ. ಇದೀಗ, ಲೋಕಸಭಾ ಚುನಾವಣೆಗೆ ಇನ್ನೆರಡು ವರ್ಷಗಳು ಇರುವಾಗ, ಈಗಿನಿಂದಲೆ ಮತ್ತೊಂದು ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ.

ದೇಶದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಸರಕಾರವು ಪ್ರಾದೇಶಿಕ ಅಸ್ಮಿತೆಯನ್ನು ಕಡೆಗಣಿಸುವ ಮೂಲಕ ಏಕಸ್ವಾಮ್ಯತೆ ಸಾಧಿಸಲು ಯತ್ನಿಸುತ್ತಿದೆ ಎಂದು ಈಗಾಗಲೆ ಹಲವಾರು ಪ್ರಾದೇಶಿಕ ಪಕ್ಷಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ತೃತೀಯ ರಂಗವನ್ನು ಬಲಪಡಿಸುವ ಮೂಲಕ ರಾಷ್ಟ್ರೀಯ ಪಕ್ಷಗಳಿಗೆ ಪಾಠ ಕಲಿಸಬಹುದು ಎಂಬುದು ಚಂದ್ರಶೇಖರರಾವ್ ಲೆಕ್ಕಾಚಾರವಾಗಿದೆ.

ಈಗಾಗಲೆ, ಚಂದ್ರಶೇಖರರಾವ್ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ತೃಣಮೂಲ ಕಾಂಗ್ರೆಸ್ ವರಿಷ್ಠೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಮ್ ಆದ್ಮಿ ಪಕ್ಷದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಆರ್‍ಜೆಡಿ ಮುಖ್ಯಸ್ಥ ತೇಜಸ್ವಿಯಾದವ್ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚೆಗಳನ್ನು ನಡೆಸಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರರಾವ್ ಭೇಟಿ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಒಂದಾಗುವ ನಿಟ್ಟಿನಲ್ಲಿ ಈಗಾಗಲೆ ಚರ್ಚೆಗಳು ಪ್ರಾರಂಭವಾಗಿವೆ. ವಿವಿಧ ರಾಜ್ಯಗಳಲ್ಲಿರುವ ಪ್ರಾದೇಶಿಕ ಪಕ್ಷಗಳ ಮುಖ್ಯಮಂತ್ರಿಗಳು ಒಂದಾಗಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪರ್ಯಾಯವಾಗಿ ತೃತೀಯ ರಂಗ ಸ್ಥಾಪನೆ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ಈ ಭೇಟಿ ನಡೆದಿದೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

ತೆಲಂಗಾಣದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಕೆ.ಚಂದ್ರಶೇಖರ ರಾವ್ ಅವರು ಮಾಜಿ ಪ್ರಧಾನಮಂತ್ರಿಗಳಾದ ಶ್ರೀ @H_D_Devegowda
ಅವರ ನಿವಾಸಕ್ಕೆ ಇಂದು ಭೇಟಿ ನೀಡಿದಾಗ ಆದರಪೂರ್ವಕವಾಗಿ ಅವರನ್ನು ಬರಮಾಡಿಕೊಂಡೆ.@TelanganaCMO pic.twitter.com/1mDvtEFkE5

— H D Kumaraswamy (@hd_kumaraswamy) May 26, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X