ರೋಹಿತ್ ಚಕ್ರತೀರ್ಥ ಪರಿಷ್ಕರಿಸಿದ ಪಠ್ಯ ಅಳವಡಿಸಿದರೆ ಸಿಎಂ ಮನೆಗೆ ಘೇರಾವ್: ಮಾವಳ್ಳಿ ಶಂಕರ್ ಎಚ್ಚರಿಕೆ
-

ಮಾವಳ್ಳಿ ಶಂಕರ್
ಬೆಂಗಳೂರು, ಮೇ 26: ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯಲ್ಲಿ ನಡೆದ ವಿವಾದಿತ ಪಠ್ಯಕ್ರಮವನ್ನು ಜಾರಿಗೊಳಿಸದಂತೆ ಮೇ 31ಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯನ್ನು ಪರಿಗಣನೆಗೆ ತೆಗೆದುಕೊಳ್ಳದೆ, ಪರಿಷ್ಕೃತ ಪಠ್ಯಕ್ರಮವನ್ನು ಅಳವಡಿಸಿದಲ್ಲಿ, ಮುಖ್ಯಮಂತ್ರಿ ಮನೆಗೆ ಘೇರಾವ್ ಹಾಕಲಾಗುವುದು ಎಂದು ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಪ್ರೆಸ್ಕ್ಲಬ್ನಲ್ಲಿ ಮಾತನಾಡಿದ ಅವರು, ಶಾಲೆಗಳು ಆರಂಭವಾಗಿದ್ದರೂ, ಶಾಲೆಗಳಿಗೆ ಪಠ್ಯಪುಸ್ತಕ ರವಾನೆ ಆಗಿಲ್ಲ. ಇದು ಪಠ್ಯಪುಸ್ತಕ ಪರಿಷ್ಕರಣ ಸಮಿತಿಯ ಅವಾಂತರವೇ ಆಗಿದೆ. ಸರಕಾರವು ಸಮಿತಿಯನ್ನು ಸಮರ್ಥನೆ ಮಾಡಿಕೊಳ್ಳಲು ಮುದ್ರಿಸಿದ ಪಠ್ಯವನ್ನು ಹಿಂಪಡೆದು 2 ಕೋಟಿ ರೂ.ಗಳಿಂತ ಅಧಿಕ ಹಣವನ್ನು ವ್ಯರ್ಥ ಮಾಡಿದೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ ಎಂದು ಆರೋಪಿಸಿದರು.
ವಿಧಾನಸೌಧದಲ್ಲಿರುವ ಜನಪ್ರತಿನಿಧಿಗಳು ಆಳ್ವಿಕೆಯನ್ನು ಮಾಡುತ್ತಿಲ್ಲ. ಬದಲಾಗಿ ಕೇಶವ ಕೃಪಾದಲ್ಲಿರುವ ಮುಖಂಡರು ಆಳ್ವಿಕೆ ಮಾಡುತ್ತಿದ್ದಾರೆ ಎಂದು ಅವರು ಅನುಮಾನ ವ್ಯಕ್ತಪಡಿಸಿದರು.
ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಪಠ್ಯಪರಿಷ್ಕರಣೆ ಸರಿಯೇ ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಸಮಿತಿಯಲ್ಲಿ 176 ಜನರಿದ್ದರು. ಆದರೆ ಬಿಜೆಪಿ ಸರಕಾರವು ರಚಿಸಿರುವ ಸಮಿತಿಯಲ್ಲಿ 7 ಜನರಿದ್ದರೂ, ಎಲ್ಲರೂ ಬ್ರಾಹ್ಮಣರೇ ಆಗಿದ್ದಾರೆ. ಈ ಸಮಿತಿಯು ಸೇರಿಸಿದ 10 ಪಠ್ಯಗಳಲ್ಲಿ 9 ಪಠ್ಯಗಳು ಬ್ರಾಹ್ಮಣ ಲೇಖಕರದ್ದೇ ಆಗಿದೆ. ಹಾಗಾಗಿ ಈ ಸಮಿತಿಯ ಪಠ್ಯಕ್ರಮವನ್ನು ರದ್ದುಗೊಳಿಸಿ, ಹಿಂದಿನ ಪಠ್ಯವನ್ನು ಅಳವಡಿಸಬೇಕು ಎಂದರು.
ದಲಿತ ಮುಖಂಡ ಗುರುಪ್ರಸಾದ್ ಕೆರಗೋಡು ಅವರು ಮಾತನಾಡಿ, ಸಚಿವ ಬಿ.ಸಿ. ನಾಗೇಶ್ ಅವರು ರೋಹಿತ್ ಚಕ್ರತೀರ್ಥ ಅವರನ್ನು ಐಐಟಿ-ಸಿಇಟಿ ಪ್ರೊಪೆಸರ್ ಎಂದು ಮಾಧ್ಯಮಗಳಿಗೆ ಹೇಳಿ ನಗೆಪಾಟಲಿಗೀಡಾಗಿದ್ದಾರೆ. ಅವರ ವಿದ್ಯಾರ್ಹತೆಯನ್ನಾಗಲೀ, ಎಲ್ಲಿನ ಐಐಟಿಯಲ್ಲಿ ಕೆಲಸ ಮಾಡಿದ್ದಾರೆ ಎನ್ನುವುದನ್ನಾಗಲೀ ಇದುವರೆಗೂ ತಿಳಿಸಿಲ್ಲ ಎಂದು ಹೇಳಿದರು.
ದಲಿತ ಮುಖಂಡ ವಿ. ನಾಗರಾಜ್ ಅವರು ಮಾತನಾಡಿ, ಇಷ್ಟೆಲ್ಲಾ ಅವಾಂತರಗಳು ಸೃಷ್ಟಿಯಾಗಿದ್ದರೂ, ಮುಖ್ಯಮಂತ್ರಿಗಳು ಮಾತನಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಚುನಾವಣೆ ನಡೆದಾಗ ತಕ್ಕ ಉತ್ತರವನ್ನು ನೀಡಲಾಗುತ್ತದೆ ಎಂದು ಎಚ್ಚರಿಸಿದರು.
ರಾಜ್ಯ ಬಿಜೆಪಿ ಸರಕಾರವು ದಲಿತರಿಗೆ ಅನ್ಯಾಯ ಮಾಡುತ್ತಿದೆ. ಎಸ್ಸಿಪಿ ಹಾಗೂ ಟಿಎಸ್ಪಿ ಯೋಜನೆಯಲ್ಲಿ ಮೀಸಲಿಟ್ಟ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದ್ದು, ಪರಿಶಿಷ್ಟ ಸಮುದಾಯಗಳನ್ನು ಮತಾಂತರ ಮಾಡಿದರೆ, ವಿಶೇಷ ಶಿಕ್ಷೆಯನ್ನು ನೀಡಲಾಗುತ್ತದೆ. ದಲಿತರಿಗೆ ಮನಸ್ಥಿತಿ ಸರಿಯಿಲ್ಲ ಎಂಬ ಅರ್ಥದಲ್ಲಿ ಸರಕಾರ ಮಾತನಾಡುತ್ತಿರುವುದು ಸರಿಯಲ್ಲ.
-ಗುರುಪ್ರಸಾದ್ ಕೆರಗೋಡು, ದಲಿತ ಮುಖಂಡ
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.