Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಿಕ್ಷಕ, ಪದವೀಧರ ಕ್ಷೇತ್ರದ ಚುನಾವಣೆ;...

ಶಿಕ್ಷಕ, ಪದವೀಧರ ಕ್ಷೇತ್ರದ ಚುನಾವಣೆ; ಮತದಾನದ ಅವಧಿ ವಿಸ್ತರಣೆಗೆ ಬಿಜೆಪಿ ಮನವಿ

ವಾರ್ತಾಭಾರತಿವಾರ್ತಾಭಾರತಿ3 Jun 2022 5:59 PM IST
share
ಶಿಕ್ಷಕ, ಪದವೀಧರ ಕ್ಷೇತ್ರದ ಚುನಾವಣೆ; ಮತದಾನದ ಅವಧಿ ವಿಸ್ತರಣೆಗೆ ಬಿಜೆಪಿ ಮನವಿ

ಬೆಂಗಳೂರು, ಜೂ.3: ಶಿಕ್ಷಕ ಮತ್ತು ಪದವೀಧರ ಕ್ಷೇತ್ರದ ಚುನಾವಣೆಯ ಮತದಾನದ ಅವಧಿ ವಿಸ್ತರಣೆ ಮಾಡುವಂತೆ ರಾಜ್ಯ ಬಿಜೆಪಿ ವತಿಯಿಂದ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಪಕ್ಷದ ರಾಜ್ಯ ವಕ್ತಾರ ಛಲವಾದಿ ನಾರಾಯಣಸ್ವಾಮಿ ಮತ್ತು ಚುನಾವಣಾ ಆಯೋಗ ವಿಭಾಗದ ರಾಜ್ಯ ಸಂಚಾಲಕ ದತ್ತಗುರು ಹೆಗಡೆ ಈ ಕುರಿತು ಮನವಿ ಸಲ್ಲಿಸಿದರು.

ಜೂ.13ರಂದು ಶಿಕ್ಷಕರ ಎರಡು ಕ್ಷೇತ್ರಕ್ಕೆ ಹಾಗೂ ಪದವೀಧರರ ಎರಡು ಕ್ಷೇತ್ರಕ್ಕೆ ಚುನಾವಣೆ ಘೋಷಣೆ ಆದ ಹಿನ್ನೆಲೆಯಲ್ಲಿ ಈ ಕೆಳಗಿನ ಸಾಂದರ್ಭಿಕ ಸಮಸ್ಯೆಗಳಿಂದ ಮತದಾನದ ಅವಧಿ ವಿಸ್ತರಣೆ ಸೂಕ್ತ ಅನ್ನಿಸುತ್ತದೆ ಎಂದು ಗಮನ ಸೆಳೆಯಲಾಯಿತು.

ಎಲ್ಲ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಶಿಕ್ಷಕರೂ ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾವಣೆ ಮಾಡಿಕೊಂಡಿದ್ದು, ಹಲವು ಶಿಕ್ಷಕರು ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಮತ ಚುನಾವಣೆಯ ಅರ್ಹತೆ ಹೊಂದಿದ್ದು, ಶಿಕ್ಷಕ ಕ್ಷೇತ್ರದ ಅಭ್ಯರ್ಥಿಗೆ ಮತ್ತು ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಮತ ಚಲಾಯಿಸುತ್ತಾರೆ.

ರಾಜ್ಯದ ಹಲವು ಮತಗಟ್ಟೆಗಳ ಕೋಣೆಯಲ್ಲಿ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದ ಅಭ್ಯರ್ಥಿಗಳಿಗೆ ಮತ ಹಾಕಬೇಕಾದ ಸಂದರ್ಭದಲ್ಲಿ ಒಬ್ಬ ಮತದಾರ ಮತದಾನದ ಕೋಣೆಯಿಂದ ಹೊರ ಬರುವ ಸಮಯ ವಿಳಂಬವಾಗುತ್ತದೆ ಎಂದು ಮನವಿ ತಿಳಿಸಿದೆ.

ಕೋವಿಡ್ ನಿಯಮಾನುಸಾರ ಮತದಾನ ಮಾಡುವುದು ಅನಿವಾರ್ಯವೆನ್ನುವುದು ಹಿಂದಿನ ಅನುಭವದಿಂದ ತಿಳಿಯುವುದು ಬಹಳ ಮುಖ್ಯ. ಹಲವು ಕಡೆ ಮತಗಟ್ಟೆಗಳು ಮತದಾರನ ಊರು-ಮನೆಯಿಂದ 15-20 ಕಿ.ಮೀ. ದೂರವಿದ್ದು, ಮತದಾನಕ್ಕೆ ಬರಲು ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ. 

ಶಿಕ್ಷಕರಲ್ಲದವರು, ಪದವೀಧರರಲ್ಲದವರು ನಕಲಿ (ಡುಪ್ಲಿಕೇಟ್) ಮತದಾರರು ಮತದಾನಕ್ಕೆ ಬರುತ್ತಾರೆ ಎಂಬುದನ್ನು ಹಿಂದಿನ ಚುನಾವಣೆಯ ಅನುಭವ ತಿಳಿಸಿದೆ.  ಕಾರಣ ಪ್ರತಿಯೊಬ್ಬ ಮತದಾರನ ಅರ್ಹತೆಯನ್ನು ಪರಿಶೀಲಿಸಿ ಮತದಾನ ಮಾಡಲು ಅನುವು ಮಾಡಿಕೊಡಬೇಕಾದ ಅನಿವಾರ್ಯತೆಯಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಶಿಕ್ಷಕ ಅಭ್ಯರ್ಥಿಗೆ ಹಾಗೂ ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಮತ ಹಾಕಲು ಎರಡು ಬ್ಯಾಲೆಟ್ ಪೇಪರ್ ಕೊಡಲಾಗುತ್ತದೆ. ಈ ಕೆಲಸಕ್ಕೂ ಸಮಯ ಬೇಕಾಗುತ್ತದೆ. ಎರಡೂ ಕ್ಷೇತ್ರದ ಅಭ್ಯರ್ಥಿಗಳಿಗೆ ಮತದಾನ ಮಾಡುವ ಮತದಾರರು ಎರಡು ಬೆರಳುಗಳಿಗೆ (ತೋರ ಬೆರಳು ಹಾಗೂ ಮಧ್ಯದ ಬೆರಳು) ಶಾಯಿ ಹಾಕಲಾಗುವುದು ಎಂದು ತಿಳಿದಿದೆ.

ಆದರೆ ಶಿಕ್ಷಕ ಕ್ಷೇತ್ರಕ್ಕೆ ಮತ ಚುನಾಯಿಸಿದ ಮತದಾರನಿಗೆ ಯಾವ ಬೆರಳಿಗೆ ಪದವೀಧರ ಕ್ಷೇತ್ರದ ಅಭ್ಯರ್ಥಿಗೆ ಮತ ಹಾಕಿದವರು ಯಾವ ಬೆರಳಿಗೆ ಶಾಯಿ ಹಾಕಿಸಿಕೊಳ್ಳಬೇಕು ಎನ್ನುವ ತಿಳುವಳಿಕೆ ಮತದಾರನಿಗೆ ಲಭ್ಯವಿಲ್ಲ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಈ ಎಲ್ಲ್ಲ ಸಂಗತಿಯನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸೂಕ್ತ ತಿಳುವಳಿಕೆ ನೀಡಬೇಕು ಹಾಗೂ ಮತದಾನದ ಅವಧಿ ವಿಸ್ತರಣೆ ಮಾಡುವುದು ಅತ್ಯಂತ ನ್ಯಾಯಯುತ ಎಂದು ತಿಳಿಸುತ್ತಾ, ಈ ದಿಸೆಯಲ್ಲಿ ಯೋಚಿಸಿ ಹೆಚ್ಚಿನ ಸಮಯ ಅಂದರೆ ಬೆಳಗ್ಗೆ 8 ಗಂಟೆಯಿಂದ ಸಾಯಂಕಾಲ 6 ಗಂಟೆಯ ವರೆಗೆ ವಿಸ್ತರಿಸಬೇಕೆಂದು ಬಿಜೆಪಿ ನಿಯೋಗ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X